Wednesday, October 21, 2020

* ಆಕ್ರಂದನ *

ಉಂಡವನಿಗೆ ತಿಳಿಯದು ಹಸಿದವನ ದಾಹ 

ಬಂಡೆಳವ ಮುನ್ನ ನೀಡುಬೇಕು ಜಾಣ

ಇಂದು ನಿನ್ನದು ನಾಳಿನ್ನಾರದು ನಾಕಾಣೆ

ಉಣಿಸುವ ಕರದಲಿರುವುದಿವರ ಪ್ರಾಣ//

 

ಬೀದಿ ಬದಿಯಲ್ಲಿ ಭಿಕ್ಷೆ ಬೇಡುವರೆ

ಹಿಡಯಷ್ಟು ಪ್ರೀತಿಯ ನೀಡಿದರೆ

ಕೈಲಾದಷ್ಟು ಹೊಟ್ಟೆಗೆ ಹಿಟ್ಟು ಕೊಟ್ಟರೆ

ಕೈಚಾಚಿ ಪಡೆವರೆ  ಬಡತನ ಹಿಂಗಿದರೆ


ಅನ್ನ ನೀಡುವ ಕೈಗಳು ಸದಾ ಮೇಲಿವೆ

ಅರಿಯದೆ ಹರಿದು ತಿನ್ನುವ ಕರಗಳಿವೆ

ಅರೆಗಂಜಿಗಾಗಿ ಇವರೆಲ್ಲರ ಆಕ್ರಂದನ

ಹರನಿಲ್ಲವೆ ನೀಡಿ ಮರೆಯಲು ಮೇಲೆ/ 


ತಿಳಿಯದೆ ತೆವಲಿಗೆ ತಂದರು ಭೂಮಿಗೆ  

ತಂದೆ ತಾಯಿ ಸಮಾನರಿವರು ಹಂದಿಗೆ

ತಿರಿದು ತಿನ್ನುವ ಮಕ್ಕಳದಲ್ಲದು ತಪ್ಪು

ಪೊರೆವಂತೆ ನಟಿಸುವವನಾವ ಬಗೆ //


        ಬಸನಗೌಡಗೌಡರ


No comments:

Post a Comment

ಹಾನಾಪೂರದಲ್ಲೊಂದು ನಕ್ಷತ್ರ

  "ಪ್ರತಿಭೆಗಳು ಗುಡಿಸಲುಗಳಲ್ಲಿ ಅರಳುತ್ತವೆ ಎನ್ನುವ ಮಾತೊಂದಿದೆ" ಅದು ಅಕ್ಷರಶಃ ಸತ್ಯ ಎನ್ನುವುದು ಈಗ  ಹಾನಾಪೂರ ಗ್ರಾಮದ ಕರಿಯಪ್ಪ ಮಾದರ ಎನ್ನುವ ಹುಡುಗ ಮಾ...