Friday, July 30, 2021

* ನಾಕವರಳಿಸು ಧರಣಿಯಲ್ಲಿ *

ಯಾರಾದರೇನು ಆಳುವ ಅರಸ
ಯಾರಲ್ಲಿ ಭೇಧತಾರದ ಜಗವಿರಲಿ 
ನಾರಿಯೆ ನರನೆ ನಮಗಿಲ್ಲ ಚಿಂತೆ 
ಹರಿ ಬಂದು ಪವಡಿಸಬೇಕು ಅಲ್ಲಿ/

ಅರಳು ಹುರಿದಂತೆ ಸವಿ ಮಾತಾಡಿ
ಕೊರಳು ಕೊಯ್ಯಲು ಕೈ ಹಾಕದಿರಲಿ
ಹರಿತ ಆಯುಧ ಮಾಡಿರಿ ತಪ್ಪಿದಲ್ಲಿ
ಸರಿಯಾದ ಪಾಠವಾಗಲಿ ಕಣದಲ್ಲಿ/
 
ನಾಮ ಹೋಮ ಬಲದಿಂದ ಹತ್ತುವರು
ರಾಮನಾಳಿದ ಸೀಮೆಯ ಅಶ್ವ ಮೇಧ
ಸಮ ಪಾಲಿಗೆ ಕಾದಿರುವರು ಭರತರು
ಗಮನಿಸಿ ನಾಕವರಳಿಸಿ ಧರಣಿಯಲ್ಲಿ/

ರಾಗಿ ಬೆಳೆದವಗೂ ಸಿಗಲಿ ರಾಮರಾಜ್ಯ
ಬಾಗಿ ನಡೆದವರಿಗೂ ಬರಲಿ ಅಭಯ
ಸಾಗಿ ಹರಿದ ನದಿ ಸೇರಿವವು ಸಾಗರಕೆ
ಸಾಗದೆ ಸಂಗ್ರಹದ ಕೊಳೆ ಬೇಡ ಅಲ್ಲಿ /

                ಶ್ರೀ ಬಸನಗೌಡ ಗೌಡರ

No comments:

Post a Comment

ಹಾನಾಪೂರದಲ್ಲೊಂದು ನಕ್ಷತ್ರ

  "ಪ್ರತಿಭೆಗಳು ಗುಡಿಸಲುಗಳಲ್ಲಿ ಅರಳುತ್ತವೆ ಎನ್ನುವ ಮಾತೊಂದಿದೆ" ಅದು ಅಕ್ಷರಶಃ ಸತ್ಯ ಎನ್ನುವುದು ಈಗ  ಹಾನಾಪೂರ ಗ್ರಾಮದ ಕರಿಯಪ್ಪ ಮಾದರ ಎನ್ನುವ ಹುಡುಗ ಮಾ...