Sunday, July 27, 2025

ಬದುಕು ಬಂಗಾರ

ಬೆನ್ನು ಬಾಗಿ, ಕಣ್ಣು ಮಂಜಾದವು
ಅನ್ನಹುಡುಕಲು ಅನುದಿನವೂ ಪಯಣ 
ತನ್ನವರು ತಂದು ಹಾಕುವುದೇ 
ಪರಹಾರವೆನ್ನದೆ ತಾ ದುಡಿದುದೆ ಪರಮಾನ್ನ //

ಬಿಸಿ ರಕ್ತ ಬಸಿಯುವಾಗ ಹೊಸ ಹುರುಪು
ಕುಸಿಯಿಂದ ಹೊಸ ನಗುವಿನಾ ಸಂಸಾರ
ಬಿಸಿಲು ಬಾಗಿ ಮುಸ್ಸಂಜೆಯಾವರಿಸಿ
ಕಸುವು ಕತ್ತಲೆಯಾವರಿಸಿದರೆ ಹಸಿವಿಗೆಲ್ಲಿದೆ ಬರ//

ಕಾಸಿಗೂ ಕಾಲಿಗೂ ಚೌಕಾಸಿ 
ನಡೆದಷ್ಟು ಪಡೆಯಲು ನಾ ಮುಂದು ತಾ ಮುಂದು
ನಡೆಯಿದಿದ್ದರೆ ಪಡೆಯವುದೇನಿದೆ 
ಬದುಕೊಂದು ಕಡೆಗೆ ನರಕದ ಮನೆ //

ಕನಸುಗಳು ಬೆನ್ನೇರಿ ಕವನಗಳ ಕಟ್ಟಿ
ಎಲ್ಲೆಲ್ಲೋ ಕವನ ಸಂಕಲನಗಳೇ
ಮನಸ್ಸುಗಳು ಹದವರಿತು  ಮೌನದಾಲಾಪ
ಮನವೆಲ್ಲಾ ಕಟ್ಟಿದ ಗಾನಗಂಧರ್ವ ಲೋಕ//

ನಡೆದದ್ದು ಬಹುದೂರ ಮಾಡಬೇಕಿದೆ ಪೂರ್ಣ
ಹೆಡೆಯಲ್ಲಿ ತೂಗಾಡಿದೆ ಕೇಸರಿಯ ವರ್ಣ
ಪಡೆಯಲು ದುಡಿಯುವುದೊಂದೆ ಹಂಬಲ
ತಡೆಯಾಲಾರಿಲ್ಲ ಉಳಿದ ಜೀವನವೆ ಬೆಂಬಲ//





 


 




 




No comments:

Post a Comment

ಹಾನಾಪೂರದಲ್ಲೊಂದು ನಕ್ಷತ್ರ

  "ಪ್ರತಿಭೆಗಳು ಗುಡಿಸಲುಗಳಲ್ಲಿ ಅರಳುತ್ತವೆ ಎನ್ನುವ ಮಾತೊಂದಿದೆ" ಅದು ಅಕ್ಷರಶಃ ಸತ್ಯ ಎನ್ನುವುದು ಈಗ  ಹಾನಾಪೂರ ಗ್ರಾಮದ ಕರಿಯಪ್ಪ ಮಾದರ ಎನ್ನುವ ಹುಡುಗ ಮಾ...