Tuesday, August 19, 2025

ಹಾಲಹಂಡೆ










ಬಂಡೆಗಳ ನಾಡಲ್ಲಿ ಬೆಳೆದು
ನಿಂತಿಹಳು ಹಾನಾಪೂರದ ಹಾಲಹಂಡೆ 
ಕಂಡು ಸಂತಸ ಪಡು ನೀ ಮಳೆಗಾಲದಂದು
ಫೀ ಇಲ್ಲ, ಪೇ ಮಾಡಬೇಕಿಲ್ಲ ಪಳಾರದ ಹಂಗಿಲ್ಲ 
ನಿಷ್ಕಲ್ಮಷ  ಮನಸ್ಸೆ ನಿನ್ನೂಲುವಿನಾ ಪೂಜೆ ಇವಳಿಗೆ ॥

ನಿಜ ಭಾವದಾಲಪವೆ ಭಜನೆ ಆ ಬಯಲಿಗೆ !
ತಂದು ಸುರಿಯಿರಿ ನಿಮ್ಮ ಗೊಜಲು ಗೊಂದಲ
ತಿಂದು ಜೀರ್ಣೀಸುವ ಶಕ್ತಿ ಯುಂಟು 
ಈ ಹಸಿರು ಹೊದ್ದ ಹೊಂಗೆ ಮರದ ಬಾಲೆಗೆ ! 

ಮೂವತ್ತು ಅಡಿಗಳ ಮೇಲಿನಿಂದಿವಳ ನರ್ತನ 
ಜುಳು ಜುಳು ನಾದವೆ ಇವಳ ಕೀರ್ತನೆ.
ಅಪ್ಪಳಿಸಿ ಹಾರುವ ಹನಿಗಳೆ 
ಮಂತ್ರಾಕ್ಷತೆ ಈ ಮದುವನಗಿತ್ತಿಗೆ !

ಅಂದು ದನಮೇಯಿಸಲೋದ ನನ್ನಕ್ಕತಂಗಿ
ಮೈಮರೆತು ಮೆಟ್ಟಿನಿಂತರು ಪಡುವನ ದಿಕ್ಕಿಗೆ 
ಹೊತ್ತು ಜಾರಿ ಕತ್ತಲಾವರಿಸಿ 
ಚಿತ್ತಕಳೆದುಕೊಂಡರಲ್ಲಿ ।

ಮಾಹಾಮಳೆಯು ಬೆಂಬತ್ತಿ 
ಬಂಡೆಗಲ್ಲಿಗೆ ಹೆದರಿ 
ಹಾವಾಗಿ ಹರಿದಳು ಮಾಯಾವಿ 
ಈ ವೈಯಾರಗಿತ್ತಿ ।
ಪಡಿಯ ನಡು ನಡುವೆ ನಡಿಗೆ ರೌದ್ರಾವತಾರ।
ಹಿಡಿದು ನೂಕಲು ಸಜ್ಜಾದಳು ಯಮರೂಪಿ॥

ಮೇಯಿಸಿದ ರಾಸು ಮನೆತಲುಪಿದಾಗ 
ಮನವೆಲ್ಲ ಗಲಿಬಿಲಿ, ಮನೆಯ ಕರೆಯೇ 
ಮರಣ ಮೃದಂಗದ ಬಲೆ !
ದಾಟಲೆಲ್ಲಿದೆ ಕಾಲಿನಲ್ಲಿ ಶಕ್ತಿ ! 
ಮೆಲ್ಲ ಮೆಲ್ಲನೆ ಒಂದಾಗಿ
ಓಡಿದರು ..ಓಡಿದರು.. ನಾವು ತಲುಪದ
ನಕ್ಷತ್ರ ವಾವಾಗುವ ಅನಂತ ದಾರಿಗೆ.॥













No comments:

Post a Comment

*ಅಪ್ಪ ನಮ್ಮೆಲ್ಲರ ಛಪ್ಪರ *

ವಿಶ್ವ ಅಪ್ಪಂದಿರ ದಿನದ ಶುಭಾಶಯಗಳು         ಈ ದಿನ ಅಪ್ಪನ ಪ್ರೀತಿಯ ಈ ನೆನಪುಗಳ ಬುತ್ತಿ  ಜಾಮೂನಿನಂತೆ ತೇಲಿ ಬರುತ್ತಿವೆ.ಇವು ಎಲ್ಲರ ಜೀವನದಲ್ಲೂ ಸಹಜವಾಗಿದ್ದರೂ ಅವುಗಳ...