Monday, February 28, 2022
* ಶಿವರಾತ್ರಿಯ ಶಿವಧ್ಯಾನ *
Saturday, February 26, 2022
ರವಿವಾರ ರಗಳೆ ಚಿಂತನೆ
Friday, February 25, 2022
* ವರ್ತಮಾನದ ಗಾಡಿ *
* ವರ್ತಮಾನದ ಗಾಡಿ *
ಇದು ಕರ್ತಾರನ ವರ್ತಮಾನದ
ಗಾಡಿ,ಇದಕ್ಕೆ ಜೋಡಿಸಿದರು
ಸಿಲಿಕಾನ್ ಚಕ್ರದ ಗಾಲಿ
ನಡೆಸಿವರು ಸುಡುಗಾಡ ದಾರಿ !
ಕಡಿವಾಣ ವಿಲ್ಲದ ಕುದುರೆ
ಓಡುತಿದೆ ಕಣ್ಣಿಗೆ ಪಟ್ಟಿಯ ಕಟ್ಟಿ
ಕಾಲನ ಕತ್ತಿ, ಮೇಲೆ ಭಿತ್ತಿ /
ಯಾರ ಕುತ್ತಿಗೆಗೆ ಸುತ್ತುವುದು
ಯಾರು ಬಲ್ಲ ,ಅರಿಯದೆ ತಿರುಗಿದೆ
ಗಿರಗಿರನೆ ಮೇಲೆ ಕೆಳಗೆ,
ಕ್ರಮಿಸುವುದು ದೂರ....
ಮೇಲೆ ಹೋದರೆ ಕೆಳಗೆ ಇಳಿಯುವಾಶೆ
ಕೆಳಗಿಳಿದರೆ ಮೇಲೇರುವಾಶೆ //
ಬಯಕೆಗಳು ಹೊದ್ದು ಮಲಗಿವೆ
ನಿದ್ದೆ ಮಾಡಲು ಇಲ್ಲಿ ಇಲ್ಲ ಪುರಸೊತ್ತು
ಮುಂದೆ ಹೋಗುವುದೇ ಎಲ್ಲರ ಚಿತ್ತ /
ಅರೆಗುಂಜಿ ಹೀರುವ ಇರುವೆಗೂ
ಹಿರಿಯಾಶೆ ಆರು ತಿಂಗಳ ಅನ್ನ
ತನ್ನದಾಗಿಸುವಾಸೆ, ಮೂರೆ ತಿಂಗಳಿಗೆ
ಮುಗಿಯುವುದು ಅದರ ಸಂತೆ //
ಹೆಕ್ಕಿ ಕಟ್ಟುವ ಹುತ್ತ ಹೆರವರದು.
ಹತ್ತಿ ಹತ್ತಿ ನೋಡುವುದೆ
ಅದರ ಭ್ರಮಣದ ಸಂಭ್ರಮ/
ಹಾವುಗಳು ವಾಸಮಾಡುವವು
ಎನ್ನುವುದು ಅದಕೇನು ಗೊತ್ತು //
ಹಾರುವ ಹಕ್ಕಿಗಳ ಮೇಲೆ
ಉರಿಯುವ ಅಸ್ತ್ರಗಳು,
ಯಾರ ದೀಪ ಆರಿದರೇನು ?
ದಾರಿ ನನ್ನದೆ ಆಗಬೇಕು !
ನಿನ್ನ ದಾರಿ ಕತ್ತಲಾದ ಮೇಲೆಯೇ
ಗೊತ್ತಾಗುವುದು ಕರ್ತಾರನ
ವರ್ತಮಾನದ ಗಾಡಿ //
Tuesday, February 22, 2022
Sunday, February 20, 2022
* ಕನ್ನಡದ ಕನಸುಗಾರ *
Wednesday, February 16, 2022
ಬೆಳದಿಂಗಳ ಕಾವ್ಯಾನುಸಂಧಾನ ಸರಣಿ 4
Monday, February 14, 2022
*ಪ್ರೀತಿಸಲು ಒಂದು ದಿನ ಬೇಕೆ?*
ಹಾನಾಪೂರದಲ್ಲೊಂದು ನಕ್ಷತ್ರ
"ಪ್ರತಿಭೆಗಳು ಗುಡಿಸಲುಗಳಲ್ಲಿ ಅರಳುತ್ತವೆ ಎನ್ನುವ ಮಾತೊಂದಿದೆ" ಅದು ಅಕ್ಷರಶಃ ಸತ್ಯ ಎನ್ನುವುದು ಈಗ ಹಾನಾಪೂರ ಗ್ರಾಮದ ಕರಿಯಪ್ಪ ಮಾದರ ಎನ್ನುವ ಹುಡುಗ ಮಾ...
-
🌺 ಪ್ರಿಯ ಮಿತ್ರರೇ 💐🙏 ಭಾರತದ ಇತಿಹಾಸದಲ್ಲಿ ಗುಪ್ತರ ಕಾಲವನ್ನು "ಸುವರ್ಣಯುಗ" ಎಂದು ಕರೆಯಲಾಗುತ್ತದೆ, ಆದ್ದರಿಂದ ಕೆಎಎಸ್, ಪಿಎಸ್ಐ, ಇಎಸ್ಐ, ಎಸ್ಡಿಎ, ...
-
ಅಕ್ಬರನ ಸಾಧನೆಗಳು ಮೊಗಲರ ಅರಸರಲ್ಲಿಯೇ ಅಕ್ಬರ ಅತ್ಯಂತ ಶ್ರೇಷ್ಟ ಅರಸ.ಶೂರ ಸೇನಾನಿಯಾಗಿ ,ದಕ್ಷ ಆಡಳಿತಗಾನಾಗಿ, ಧರ್ಮ ಸಹಿಷ್ಣುವಾಗಿ,ಕಲೆ & ಸಾಹಿತ್ಯ ಫೋಷಕನಾಗ...
-
ಬಸವೇಶ್ವರರ ಸಾಮಾಜಿಕ –ಧಾರ್ಮಿಕ ಸುಧಾರಣೆಗಳು ಬಸವೇಶ್ವರರು ಬಾಗೆವಾಡಿಯಲ್ಲಿ ಮಾದರಸ ಮಾದಲಾಂಬಿಕೆಯ ಮಗನಾಗಿ ಜನಿಸಿ ಜಾತವೇದ ಮುನಿಗಳಲ್ಲಿ ವಿದ್ಯಾಭ್ಯಾಸ ಮಾಡಿ ಬಿಜ್ಜಳನ ಆಸ...